ADVERTISEMENT

ಕೆಪಿಸಿಸಿ ಕಚೇರಿಯಿಂದಲೇ ಸಿ.ಡಿ.ಪ್ರಕರಣದ ನಿರ್ವಹಣೆ: ಬಿಜೆಪಿ ಆರೋಪ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 10:08 IST
Last Updated 31 ಮಾರ್ಚ್ 2021, 10:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್‌–ಬಿಜೆಪಿ ಟ್ವೀಟ್‌ ಸಮರ ಬುಧವಾರವೂ ಮುಂದುವರಿದಿದೆ.

ಪ್ರಕರಣ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಸಂತ್ರಸ್ತೆಗೆ ನಲಪಾಡ್‌ ಸ್ನೇಹಿತರು ಕಾರಿನ ವ್ಯವಸ್ಥೆ ಮಾಡುತ್ತಾರೆ. ಸಂತ್ರಸ್ಥೆಯ ಕಾರನ್ನು ನಲಪಾಡ್ ಸ್ನೇಹಿತರು ಹಿಂಬಾಲಿಸುತ್ತಾರೆ. ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ದಿನದಿಂದ ದಿನಕ್ಕೆ ನಿಜವಾಗುತ್ತಿದೆ’ ಎಂದು ಆರೋಪಿಸಿದೆ.

‘ಏನಾಗುತ್ತಿದೆ ಇಲ್ಲಿ!? ಪ್ರಕರಣದ ಸಂತ್ರಸ್ತೆ ಫೋನ್‌ ಸಂಭಾಷಣೆಯಲ್ಲಿ ಮಹಾನಾಯಕ ನೆರವು ನೀಡುತ್ತಿದ್ದಾರೆ ಎಂದು ಹೇಳುತ್ತಾರೆ. ನ್ಯಾಯಾಧೀಶರ ಮುಂದೆ ಹಾಜರಾಗುವಾಗ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಮುಕುಂದ್‌ ರಾಜ್ ಹಾಜರಿರುತ್ತಾರೆ’ ಎಂದು ಬಿಜೆಪಿ ಮತ್ತೊಂದು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.