ADVERTISEMENT

ಕಾಂಗ್ರೆಸ್‌ ಒಂದು ‘ಕುಡುಕರ ಬಾರ್‌’ ಇದ್ದಂಗೆ: ಬಿಜೆಪಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 11:10 IST
Last Updated 1 ಏಪ್ರಿಲ್ 2021, 11:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್‌–ಬಿಜೆಪಿ ಟ್ವೀಟ್‌ ಸಮರ ಗುರುವಾರವೂ ಮುಂದುವರಿದಿದೆ.

‘ರಾಜ್ಯ ಬಿಜೆಪಿ ಸರ್ಕಾರ ಈಗ ‘ಹರಿದ ಬನಿಯನ್’ ಅತ್ತ ಎಳೆದರೆ ಇತ್ತ ತೋರುತ್ತದೆ, ಇತ್ತ ಎಳೆದರೆ ಅತ್ತ ತೋರುತ್ತದೆ! ಎಂದು ಕಾಂಗ್ರೆಸ್ ವ್ಯಂಗ್ಯವಾಡಿತ್ತು. ಇದಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ.

ಇಂದಿನ ಕಾಂಗ್ರೆಸ್‌ ಒಂದು ‘ಕುಡುಕರ ಬಾರ್’ ಇದ್ದಂಗೆ. ಇಲ್ಲಿ ನಡೆಯುವುದು ಸಿಡಿ ಅವ್ಯವಹಾರ, ನಾಯಕರ ನಡುವೆ ಕಚ್ಚಾಟ ಹಾಗೂ ಹೊಡೆದಾಟ ಮಾತ್ರ!’ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ADVERTISEMENT

‘ದಲಿತ ಶಾಸಕ ಅಖಂಡ ಅವರು ಎಷ್ಟು ನೆರವು ಬೇಡಿದರೂ ಕಾಂಗ್ರೆಸ್‌ ಪಕ್ಷ ಅವರ ನೆರವಿಗೆ ಧಾವಿಸಲಿಲ್ಲ. ಸಿಡಿ ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಕೆಪಿಸಿಸಿ ಸಂಪೂರ್ಣವಾಗಿ ಬಳಸಿಕೊಳ್ಳುತ್ತಿದೆ. ಹಣಕಾಸಿನ ನೆರವು, ಕಾನೂನು ಸಲಹೆ, ವಾಹನದ ವ್ಯವಸ್ಥೆ ಎಲ್ಲವೂ ಕೆಪಿಸಿಸಿ ಕಚೇರಿಯಿಂದಲೇ ಆಗುತ್ತಿರುವುದರ ಹಿಂದಿನ ಉದ್ದೇಶವೇನು?’ ಎಂದು ಬಿಜೆಪಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.