ADVERTISEMENT

ಯಾರು ಯಾರಿಗೆ ಕೈ ಎತ್ತುತ್ತಾರೆ ನೋಡೋಣ: ಕುಮಾರಸ್ವಾಮಿ

ಎಚ್.ಡಿ.ಕುಮಾರಸ್ವಾಮಿ
Published 4 ಆಗಸ್ಟ್ 2022, 21:00 IST
Last Updated 4 ಆಗಸ್ಟ್ 2022, 21:00 IST
   

ರಾಮನಗರ: ‘ನಾನು ಕೈ ಎತ್ತಿಸಿಕೊಂಡು ಬೆನ್ನಿಗೆ ಚೂರಿ ಹಾಕಿಸಿಕೊಂಡಾಗಿದೆ. ಈಗ ಇಬ್ಬರು ಕೈ ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ‌ ಮುಂದೆ ನೋಡೋಣ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮದಿನಾಚರಣೆಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಯಾಗಿ ಕೈಎತ್ತಿ ಒಗ್ಗಟ್ಟು ಪ್ರದರ್ಶಿಸಿದ ಕುರಿತು ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು.

‘ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಾನೂ ಹೀಗೆ ಕೈ ಎತ್ತಿದ್ದೆ. ಕೈ ಎತ್ತುವುದು, ಇಳಿಸುವುದು ಸಂದರ್ಭಕ್ಕೆ ತಕ್ಕಂತೆ ನಡೆಯುತ್ತವೆ’ ಎಂದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.