ADVERTISEMENT

ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್‌ ಅಜೆಂಡಾ: ಸಾಕ್ಷಿ ಇಲ್ಲಿದೆ ಎಂದ ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಫೆಬ್ರುವರಿ 2022, 11:33 IST
Last Updated 18 ಫೆಬ್ರುವರಿ 2022, 11:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಷ್ಟ್ರಧ್ವಜವನ್ನು ಬದಲಾಯಿಸುವುದು ಕಾಂಗ್ರೆಸ್‌ನ ಹಿಡನ್‌ ಅಜೆಂಡಾ ಆಗಿದೆ ಈ ಕುರಿತು ಸಾಕ್ಷಿ ಇದೆ ಎಂದು ಬಿಜೆಪಿ ಹೇಳಿದೆ.

ರಾಷ್ಟ್ರಧ್ವಜದ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ರಾಷ್ಟ್ರಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು? ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ’ ಎಂದು ಪ್ರಶ್ನಿಸಿದೆ.

‘ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುಳ್ಳು ಪ್ರಚಾರ ನಡೆಸಿದರು. ಆದರೆ, ಇತ್ತ ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ’ ಎಂದು ಬಿಜೆಪಿ ಟೀಕಿಸಿದೆ.

‘ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು’ ಎಂದು ಬಿಜೆಪಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.