ADVERTISEMENT

ಬಿಜೆಪಿಗೆ ಬೆಲೆ ಏರಿಕೆ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸುವ ತಾಕತ್ತಿದೆಯೇ? ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಆಗಸ್ಟ್ 2021, 9:47 IST
Last Updated 14 ಆಗಸ್ಟ್ 2021, 9:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಜೆಪಿಯವರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಜನಾಭಿಪ್ರಾಯ ಸಂಗ್ರಹಿಸಿಸುವ ತಾಕತ್ತು ಇದಿಯೇ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಬಿಜೆಪಿಗರು ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೋ, ಬೇಡವೋ ಎಂದು ಜನಾಭಿಪ್ರಾಯ ಸಂಗ್ರಹಿಸುತ್ತಿದ್ದಾರಂತೆ. ಆದರೆ, ಪೆಟ್ರೋಲ್ ಬೆಲೆ ಇಳಿಸಬೇಕೋ, ಬೇಡವೋ?, ಉದ್ಯೋಗ ನೀಡಬೇಕೋ, ಬೇಡವೋ?, ಲಸಿಕೆ ನೀಡಬೇಕೋ, ಲಾಕ್‌ಡೌನ್ ಮಾಡಬೇಕೋ?, ಬೆಲೆ ಏರಿಕೆ ತಡೆಯಬೇಕೋ, ಬೇಡವೋ? ಮುಂತಾದ ಜನಪರ ವಿಚಾರಗಳ ಅಭಿಪ್ರಾಯ ಕೇಳುವ ತಾಕತ್ತಿದೆಯೇ ಬಿಜೆಪಿಗೆ?’ ಎಂದು ಪ್ರಶ್ನಿಸಿದೆ.

‘ಹಲವು ದೇಶಗಳು ತಮ್ಮ ದೇಶದ ಜನತೆಗೆ ಸಂಪೂರ್ಣ ಲಸಿಕೆ ನೀಡಿ ಕೋವಿಡ್ ನಿಯಮಗಳನ್ನು ರದ್ದುಗೊಳಿಸಿ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿವೆ. ಆದರೆ, ನಮ್ಮಲ್ಲಿ ಒಂದು ವರ್ಷ ಸಮಯಾವಕಾಶ ಇದ್ದರೂ ಬಿಜೆಪಿ ಸರ್ಕಾರ ಲಸಿಕೆ ನೀಡಲಾಗದೆ ಇನ್ನೂ ಸಹ ಲಾಕ್‌ಡೌನ್ ಮಾಡುವ ಬಗ್ಗೆಯೇ ಚರ್ಚೆಯಲ್ಲಿರುವುದು ವಿಪರ್ಯಾಸ. ಬಿಜೆಪಿಯ ವೈಫಲ್ಯ ರಾಜ್ಯಕ್ಕೆ ಮಾರಕವಾಗಲಿದೆ’ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.