ADVERTISEMENT

ಜೆಡಿಎಸ್‌ನಿಂದ ಪುಟ್ಟಣ್ಣ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 13:33 IST
Last Updated 6 ನವೆಂಬರ್ 2019, 13:33 IST
   

ರಾಮನಗರ: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಪ್ರಕಟಣೆ ಹೊರಟಿಸಿದ್ದಾರೆ.

ಚನ್ನಪಟ್ಟಣದವರಾದ ಪುಟ್ಟಣ್ಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಅವರ ಸದಸ್ಯತ್ವದ ಅವಧಿ 2020ರ ಜೂನ್ ವರೆಗೆ ಇದೆ. ಎಚ್.ಡಿ. ಕುಮಾರಸ್ವಾಮಿ ನಡುವಿನ ಭಿನ್ನಾಭಿಪ್ರಾಯದಿಂದ ಅವರು ಕಳೆದ ಕೆಲ ವರ್ಷಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು.

ಈಚೆಗೆ ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಪುಟ್ಟಣ್ಣ, ‘ನಾನೂ ಸೇರಿದಂತೆ ಜೆಡಿಎಸ್‌ನ ಬಹುತೇಕ ಪರಿಷತ್ ಸದಸ್ಯರು ಪಕ್ಷ ತೊರೆಯಲು ಚಿಂತನೆ ನಡೆಸಿದ್ದೇವೆ’ಎಂದು ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.