ADVERTISEMENT

‌ಹತಾಶೆಯಲ್ಲಿರುವ ಈಶ್ವರಪ್ಪ ನಾಲಿಗೆ –ಮಿದುಳುಗೆ ಸಂಪರ್ಕ ತಪ್ಪಿದೆ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2021, 9:18 IST
Last Updated 3 ಅಕ್ಟೋಬರ್ 2021, 9:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ತಾವು ಜೀವಮಾನದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಹತಾಶೆಯಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ನಾಯಕರ ಕುರಿತ ಈಶ್ವರಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದ್ದು, ನಾಲಿಗೆ – ಮಿದುಳಿಗೆ ಸಂಪರ್ಕ ತಪ್ಪಿದೆ’ ಎಂದು ವ್ಯಂಗ್ಯವಾಡಿದೆ.

‘ಈಶ್ವರಪ್ಪ ಅವರೇ, ನಿಮ್ಮ ಚಿಕಿತ್ಸೆಯ ವೆಚ್ಚವನ್ನು ಕಾಂಗ್ರೆಸ್‌ ಭರಿಸುತ್ತದೆ. ಕೂಡಲೇ ನಿಮ್ಹಾನ್ಸ್‌ಗೆ ದಾಖಲಾಗಿ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಭಾನುವಾರ ಸಚಿವ ಕೆ.ಎಸ್.ಈಶ್ವರಪ್ಪ ವಿವಾದ್ಮಾತಕ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.