ADVERTISEMENT

ಕಾಂಗ್ರೆಸ್ ಜಾತ್ರೆ ಶುರು ಎಂದಿದ್ದೀರಿ, ಏನು ಪ್ರಯೋಜನ: ಡಿಕೆಶಿಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಡಿಸೆಂಬರ್ 2021, 6:31 IST
Last Updated 3 ಡಿಸೆಂಬರ್ 2021, 6:31 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ‘‌‌‌ಡಿ.ಕೆ.ಶಿವಕುಮಾರ್‌ ಅವರೇ, ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಲಾಗದ ನೀವು ಅಸಹಾಯಕರು’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಶಿವಕುಮಾರ್‌ ಅವರೇ, ರಾಜ್ಯದಾದ್ಯಂತ ಕಾಂಗ್ರೆಸ್ ಜಾತ್ರೆ ಶುರುವಾಗಿದೆ ಎಂದಿದ್ದೀರಿ, ಏನು ಪ್ರಯೋಜನ?, ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಲು ನಿಮ್ಮಿಂದ ಸಾಧ್ಯವಾಗಿಲ್ಲ. ಹೊರಗಿನವರು ಒಳಗಿನವರು ಎಂಬುದು ಕಾಂಗ್ರೆಸ್‌ ಪಕ್ಷದಲ್ಲಿಲ್ಲ ಎನ್ನುತ್ತಲೇ ಸಿದ್ದರಾಮಯ್ಯ ಜೊತೆ ಕಾದಾಡುತ್ತೀರಿ. #ಅಸಹಾಯಕಡಿಕೆಶಿ ಎಂಬ ಹ್ಯಾಷ್‌ ಟ್ಯಾಗ್‌ ಬಳಸಿ ಲೇವಡಿ ಮಾಡಿದೆ.

‘ಆಕಾಶ ನೋಡುವುದಕ್ಕೂ ಕೆಲವೊಮ್ಮೆ ನೂಕು‌ನುಗ್ಗಲಾಗುತ್ತದೆ. ಇನ್ನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಜಾತ್ರೆ ಸೇರುವುದು ಹೆಚ್ಚೇ?, ಸೇರುವ ಜನ ಎಷ್ಟು ಸಮರ್ಥರು ಎಂಬುದೂ ಮುಖ್ಯವಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.