ಬೆಂಗಳೂರು: ಕೃಷಿ ಉತ್ಪನ್ನಗಳು ಸರಿಯಾಗಿ ಮಾರುಕಟ್ಟೆಗೆ ಬರುವ ನಿಟ್ಟಿನಲ್ಲಿ ವಿಕಾಸಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಇಬ್ಬರು ಸಚಿವರು ಬೈದಾಡಿಕೊಂಡಿದ್ದಾರೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ತೋಟಗಾರಿಕಾ ಸಚಿವ ನಾರಾಯಣ ಗೌಡ ಅವರು ಸಭೆಯ ಕೊನೆಯಲ್ಲಿ ಏಕವಚನದಲ್ಲಿ ಬೈದಾಡಿಕೊಂಡರು.
ಸೋಮಶೇಖರ್ ಅವರು ಕೃಷಿ ಸಚಿವ ಬಿ.ಸಿ.ಪಾಟೀಲ ಅವರ ಪರವಾಗಿ ಮಾತನಾಡಿದ್ದರಿಂದ ನಾರಾಯಣ ಗೌಡರು ಸಿಟ್ಟಿಗೆದ್ದರು ಎಂದು ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.