ADVERTISEMENT

ಲವ್‌ ಜಿಹಾದ್‌ | ನಳಿನ್ ಮಾತಿಗೆ ಬದ್ಧರಾದರೇ ಸಿ.ಎಂ ಬೊಮ್ಮಾಯಿ: ಖಾದರ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 5:44 IST
Last Updated 19 ಫೆಬ್ರುವರಿ 2023, 5:44 IST
ಯು.ಟಿ.ಖಾದರ್
ಯು.ಟಿ.ಖಾದರ್   

ಮಂಗಳೂರು: ‘ಅಭಿವೃದ್ಧಿ ವಿಷಯ ಮಾತನಾಡಬೇಡಿ, ಲವ್ ಜಿಹಾದ್‌ ತಡೆಯುವುದಕ್ಕಷ್ಟೇ ಗಮನ ಕೊಡಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರು ಕಾರ್ಯಕರ್ತರಿಗೆ ನೀಡಿರುವ ಕರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಷರಶಃ ಪಾಲಿಸಿದಂತಿದೆ. ಇದರಿಂದಾಗಿಯೇ ಅವರು ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಏನೇನೂ ಕೊಡುಗೆ ಕೊಟ್ಟಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ದೂರಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 12 ಮಂದಿ ಬಿಜೆಪಿ ಶಾಸಕರು ಇದ್ದರೂ ಅನುದಾನವನ್ನು ಬಿಡುಗಡೆ ಮಾಡಿಸಲು ಸಾಧ್ಯವಾಗಲಿಲ್ಲ ಎಂದರು.

ಕಡಲ್ಕೊರೆತ ತಡೆಯಲು ಮತ್ತು ಮೀನುಗಾರರ ಅಭಿವೃದ್ಧಿಗಾಗಿ ಬಜೆಟ್‌ ನಲ್ಲಿ ಯಾವುದೇ ಪ್ರಸ್ತಾವ ಇಲ್ಲ. ದಕ್ಕೆಯಲ್ಲಿ ಮೀನು ಗಾರಿಕಾ ಬೋಟ್‌ಗಳು ಹೂತು ಹೋಗು ವುದನ್ನು ತಡೆಯುವುದಕ್ಕಾಗಿ ಹೂಳು ತೆಗೆಯುವ ಭರವಸೆಯೂ ಹುಸಿಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.