ಚಾಮರಾಜನಗರದಲ್ಲಿ ಮಂಗಳವಾರ ಸುರಿದ ಭರ್ಜರಿ ಮಳೆಗೆ ರಾಜ ಕಾಲುವೆ ಉಕ್ಕಿ ಹರಿದು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಯಿತು.ಪ್ರಜಾವಾಣಿ ಚಿತ್ರ: ಸಿ.ಆರ್.ವೆಂಕಟರಾಮು
ಚಾಮರಾಜನಗರ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮಧ್ಯಾಹ್ನ ಕಾಲ ಭರ್ಜರಿ ಮಳೆಯಾಗಿದೆ.
ಹವಾಮಾನ ಇಲಾಖೆಯು ಚಾಮರಾಜನಗರ ಜಿಲ್ಲೆಗೆ ಯಲ್ಲೊ ಅಲರ್ಟ್ ಘೋಷಿಸಿದೆ.
ಹಲವು ದಿನಗಳ ಬಳಿಕ ಬಿರುಸಿನ ಮಳೆಯಾಗಿದ್ದು, ಬಿಸಿಲಿನಿಂದಾಗಿ ಬಿಸಿಯಾಗಿದ್ದ ವಾತಾವರಣ ತಂಪಾಯಿತು.
ರಾಜ್ಯದಲ್ಲಿ ಮಳೆಯ ತೀವ್ರತೆಯು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರದಂದು ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ವಿಜಯಪುರ, ಉಡುಪಿ ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನವು ಅಸ್ತವ್ಯಸ್ತಗೊಂಡಿತು.
ಬುಧವಾರ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕೊಡಗು: ವಿರಾಜಪೇಟೆಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ವಿರಾಜಪೇಟೆ: ಸುಂಕದ ಕಟ್ಟೆ ಬಳಿ ವಿದ್ಯುತ್ ಕಂಬಗಳು ಧರೆಗುರುಳಿವೆ.
ಇದರಿಂದ ವಿರಾಜಪೇಟೆ-ಸಿದ್ದಾಪುರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.