ADVERTISEMENT

ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2023, 14:18 IST
Last Updated 29 ಅಕ್ಟೋಬರ್ 2023, 14:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ವಿಜಯಪುರ ಜಿಲ್ಲೆಯಲ್ಲಿ ಭಾನುವಾರ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ ಕಾರವಾರದಲ್ಲಿ ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.