ADVERTISEMENT

ಕೊಡಗು, ಚಿಕ್ಕಮಗಳೂರು ಸೇರಿ 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2020, 20:05 IST
Last Updated 9 ಆಗಸ್ಟ್ 2020, 20:05 IST
ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ
ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 10ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಬಿರುಸುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗರಿಷ್ಠ 4 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.