ADVERTISEMENT

Covid-19 Karnataka Update: ಒಂದೇ ದಿನ 61,766 ಮಂದಿ ಗುಣಮುಖ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮೇ 2021, 15:20 IST
Last Updated 22 ಮೇ 2021, 15:20 IST
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಶನಿವಾರ 24 ಗಂಟೆಗಳ ಅಂತರದಲ್ಲಿ 61,766 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ 31,183 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 451 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 23,98,925ಕ್ಕೆ ಏರಿಕೆಯಾಗಿದೆ. ಆ ಪೈಕಿ 24,658 ಮಂದಿ ಸಾವಿಗೀಡಾಗಿದ್ದಾರೆ. ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 18,91,042 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಬೆಂಗಳೂರಿನಲ್ಲಿ ಇಂದು 8,214 ಹೊಸ ಪ್ರಕರಣಗಳು ವರದಿಯಾಗಿದ್ದು, 200 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 2,526, ಬಳ್ಳಾರಿ 2,157, ಹಾಸನ 1,641, ತುಮಕೂರು 1,545, ಬೆಳಗಾವಿ 1,026, ಧಾರವಾಡ 973, ಶಿವಮೊಗ್ಗ 971, ಮಂಡ್ಯ 798, ಚಿಕ್ಕಬಳ್ಳಪುರ 720, ಉಡುಪಿ 849, ಕೋಲಾರ ಜಿಲ್ಲೆಯಲ್ಲಿ 708 ಹೊಸ ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.