ಬೆಂಗಳೂರು:ರಾಜ್ಯದಲ್ಲಿ ಶನಿವಾರ 320 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದ್ದು, ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30 ಲಕ್ಷದ ಗಡಿ ದಾಟಿದೆ.
ಕಳೆದ ವರ್ಷ ಮಾರ್ಚ್ 8ರಂದು ರಾಜ್ಯದಲ್ಲಿ ಮೊದಲ ಪ್ರಕರಣ ವರದಿಯಾಗಿತ್ತು. ವರ್ಷಾಂತ್ಯಕ್ಕೆ ಸೋಂಕಿತರ ಸಂಖ್ಯೆ 9.19 ಲಕ್ಷಕ್ಕೆ ತಲುಪಿತ್ತು. ಈ ವರ್ಷ ಎರಡನೇ ಅಲೆಯಲ್ಲಿ ಅಧಿಕ ಮಂದಿ ಸೋಂಕಿತರಾಗಿದ್ದರಿಂದ 20.80 ಲಕ್ಷ ಪ್ರಕರಣಗಳು ಪತ್ತೆಯಾಗಿವೆ.
ಒಂದು ದಿನದ ಅವಧಿಯಲ್ಲಿ 1.05 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 20 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಸೋಂಕು ದೃಢ ಪ್ರಮಾಣ ಶೇ 0.30ರಷ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 14 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.
ಬೆಂಗಳೂರು ನಗರದಲ್ಲಿ 190 ಮಂದಿಕೋವಿಡ್ಪೀಡಿತರಾಗಿದ್ದಾರೆ. ಕೊಡಗಿನಲ್ಲಿ 21, ದಕ್ಷಿಣ ಕನ್ನಡದಲ್ಲಿ 20, ಹಾಸನದಲ್ಲಿ 17 ಹಾಗೂ ಮೈಸೂರಿನಲ್ಲಿ 14 ಪ್ರಕರಣಗಳುವರದಿಯಾಗಿವೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆಯಿದೆ.
ಸೋಂಕಿತರಲ್ಲಿ 317 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.54 ಲಕ್ಷ ದಾಟಿದೆ. 7,306 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 5,547 ಸೋಂಕಿತರಿದ್ದಾರೆ.ಯಾದಗಿರಿ, ಗದಗ ಹಾಗೂ ರಾಯಚೂರಿನಲ್ಲಿ ಸಕ್ರಿಯ ಪ್ರಕರಣಗಳಿಲ್ಲ.ಬೀದರ್, ಹಾವೇರಿ ಸೇರಿದಂತೆ 7 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.
ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿರುವುದು ಖಚಿತಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣ ವರದಿಯಾಗಿಲ್ಲ. ಮರಣ ಪ್ರಮಾಣ ದರವು ಶೇ 0.62 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,257ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 190 ಹೊಸ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 20, ಕೊಡಗು 26, ಕೊಡಗು 21, ಮೈಸೂರು 14 ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸದಾಗಿ 10 ಪ್ರಕರಣಗಳು ದೃಢರಟ್ಟಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.