ADVERTISEMENT

Covid-19 Karnataka Update: ಇಂದು 4,991 ಹೊಸ ಪ್ರಕರಣ, 6 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಏಪ್ರಿಲ್ 2021, 15:51 IST
Last Updated 2 ಏಪ್ರಿಲ್ 2021, 15:51 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ನಾಲ್ಕು ಸಾವಿರಕ್ಕೂ(4,991) ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಈವರೆಗೆ ಸೋಂಕಿತರಾದವರ ಸಂಖ್ಯೆ 10.06 ಲಕ್ಷಕ್ಕೆ ಮುಟ್ಟಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 6 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದ್ದು, ಮತ್ತೆ 3,509 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈವರೆಗೆ ಸೋಂಕಿತರಾದವರ ಸಂಖ್ಯೆ 4.41 ಲಕ್ಷ ದಾಟಿದೆ. ಮೈಸೂರು (174), ತುಮಕೂರು (142), ಬೀದರ್ (126), ದಕ್ಷಿಣ ಕನ್ನಡ (105), ಕಲಬುರ್ಗಿ (105), ಹಾಸನ (102) ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ.

ಸೋಂಕಿತರಲ್ಲಿ ಮತ್ತೆ 6 ಮಂದಿ ಸಾವಿಗೀಡಾಗಿರುವುದು ಖಚಿತಪಟ್ಟಿದೆ. ಬೆಂಗಳೂರಿನಲ್ಲಿ 5 ಮಂದಿ, ಕಲಬುರ್ಗಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,591ಕ್ಕೆ ಏರಿಕೆಯಾಗಿದೆ.

ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ. ಸದ್ಯ 34,219 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 269 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ.

ಕೊರೊನಾ ಸೋಂಕಿತರಲ್ಲಿ 1,631 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.59 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.