ADVERTISEMENT

Covid-19 Karnataka Update: 5,783 ಹೊಸ ಪ್ರಕರಣ, 168 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜೂನ್ 2021, 14:52 IST
Last Updated 18 ಜೂನ್ 2021, 14:52 IST
ಮೈಸೂರಿನ ಅರಮನೆ ಆವರಣದಲ್ಲಿ ಕೊರೊನಾ ವೈರಸ್‌ ಸೋಂಕಿನ ಪತ್ತೆ ಪರೀಕ್ಷೆ ನಡೆಯಿತು -ಪ್ರಜಾವಾಣಿ ಚಿತ್ರ.
ಮೈಸೂರಿನ ಅರಮನೆ ಆವರಣದಲ್ಲಿ ಕೊರೊನಾ ವೈರಸ್‌ ಸೋಂಕಿನ ಪತ್ತೆ ಪರೀಕ್ಷೆ ನಡೆಯಿತು -ಪ್ರಜಾವಾಣಿ ಚಿತ್ರ.    

ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ 15,290 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ 5,783 ಹೊಸ ಪ್ರಕರಣಗಳು ದೃಢಪಟ್ಟಿದ್ದು, 168 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 27,96,121ಕ್ಕೆ ಏರಿಕೆಯಾಗಿದೆ. ಆ ಪೈಕಿ 33,602 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಇದುವರೆಗೆ 26,25,447 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,37,050 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 4.05ರಷ್ಟಿದ್ದು, ಮರಣ ಪ್ರಮಾಣ ಶೇ.2.90 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 1,100, ದಕ್ಷಿಣ ಕನ್ನಡ 1,006, ಮೈಸೂರು 551, ಹಾಸನ 390, ಚಿಕ್ಕಮಗಳೂರು 278 ಮಂಡ್ಯ 249, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 207 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.