ADVERTISEMENT

Covid-19 Karnataka Update: 5,815 ಹೊಸ ಪ್ರಕರಣ, 161 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜೂನ್ 2021, 13:57 IST
Last Updated 19 ಜೂನ್ 2021, 13:57 IST
ಬೆಂಗಳೂರು ನಗರದ ಕೆ.ಆರ್.ಮಾರ್ಕೆಟ್ ಬಳಿ ಕೋವಿಡ್ ಸೋಂಕಿನ ಪರೀಕ್ಷೆ ಮಾಡುತ್ತಿರುವ ದೃಶ್ಯ ಕಂಡುಬಂತು -ಪ್ರಜಾವಾಣಿ ಚಿತ್ರ/ಎಂ.ಎಸ್.ಮಂಜುನಾಥ್
ಬೆಂಗಳೂರು ನಗರದ ಕೆ.ಆರ್.ಮಾರ್ಕೆಟ್ ಬಳಿ ಕೋವಿಡ್ ಸೋಂಕಿನ ಪರೀಕ್ಷೆ ಮಾಡುತ್ತಿರುವ ದೃಶ್ಯ ಕಂಡುಬಂತು -ಪ್ರಜಾವಾಣಿ ಚಿತ್ರ/ಎಂ.ಎಸ್.ಮಂಜುನಾಥ್   

ಬೆಂಗಳೂರು: ರಾಜ್ಯದಾದ್ಯಂತ ಶನಿವಾರ 11,832 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ 5,815 ಹೊಸ ಪ್ರಕರಣಗಳು ದೃಢಪಟ್ಟಿದ್ದು, 161 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936 ಕ್ಕೆ ಏರಿಕೆಯಾಗಿದೆ. ಆ ಪೈಕಿ 33,763 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಇದುವರೆಗೆ 26,37,279 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,30,872 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.38ರಷ್ಟಿದ್ದು, ಮರಣ ಪ್ರಮಾಣ ಶೇ.2.76 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 1,263, ದಕ್ಷಿಣ ಕನ್ನಡ 832, ಮೈಸೂರು 594, ಹಾಸನ 391, ಬೆಳಗಾವಿ 222, ಮಂಡ್ಯ ಜಿಲ್ಲೆಯಲ್ಲಿ 208 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.