ADVERTISEMENT

Covid-19 Karnataka Update: ರಾಜ್ಯದಲ್ಲಿ 673 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 13:44 IST
Last Updated 13 ಸೆಪ್ಟೆಂಬರ್ 2021, 13:44 IST
ಬೆಂಗಳೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಿಬಿಎಂಪಿ ಸಿಬ್ಬಂದಿ ಕೋವಿಡ್‌ ಪರೀಕ್ಷೆಗಾಗಿ ಬಾಲಕಿಯ ಮೂಗಿನ ದ್ರವ ಸಂಗ್ರಹಿಸಲು ಪ್ರಯತ್ನಿಸುತ್ತಿರುವುದು
ಬೆಂಗಳೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಿಬಿಎಂಪಿ ಸಿಬ್ಬಂದಿ ಕೋವಿಡ್‌ ಪರೀಕ್ಷೆಗಾಗಿ ಬಾಲಕಿಯ ಮೂಗಿನ ದ್ರವ ಸಂಗ್ರಹಿಸಲು ಪ್ರಯತ್ನಿಸುತ್ತಿರುವುದು   

ಬೆಂಗಳೂರು: ಕರ್ನಾಟಕದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 673 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಪ್ರಕಟಿಸಿದೆ.

ಇದೇ ಅವಧಿಯಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 1,074 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 13 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಕೋವಿಡ್‌ ಕಾರಣಗಳಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,517ಕ್ಕೆ ಏರಿಕೆಯಾಗಿದೆ. ಒಟ್ಟು 29,62,408 ಕೋವಿಡ್‌ ಪ್ರಕರಣಗಳ ಪೈಕಿ 29,08,622 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 16,241 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌–19 ದೃಢ ಪ್ರಮಾಣ ಶೇ 0.56 ಮತ್ತು ಕೋವಿಡ್‌ನಿಂದ ಮೃತಪಟ್ಟ ಪ್ರಮಾಣ ಶೇ 1.93ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ 214 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 115, ಉಡುಪಿಯಲ್ಲಿ 75, ಹಾಸನದಲ್ಲಿ 51 ಹಾಗೂ ಮೈಸೂರಿನಲ್ಲಿ 39 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.