ADVERTISEMENT

ರಾಜ್ಯದಲ್ಲಿ 62 ಕೊರೊನಾ ಪ್ರಕರಣ ದೃಢ, 3 ಸಾವು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 11:56 IST
Last Updated 27 ಮಾರ್ಚ್ 2020, 11:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಈವರೆಗೆ 62 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. ಐವರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕರಣೆ ತಿಳಿಸಿದೆ. ರೈಲಿನಲ್ಲಿ ದೆಹಲಿಗೆ ತೆರಳಿದ್ದ ತುಮಕೂರಿನ 60 ವರ್ಷದ ವೃದ್ಧರೊಬ್ಬರುಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ಸಂಪರ್ಕಕ್ಕೆ ಬಂದಿದ್ದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಗುರುವಾರ 55 ಇತ್ತು. ಶುಕ್ರವಾರ ಮತ್ತೆ7 ಜನರಲ್ಲಿಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಾದ್ಯಂತ ಕೊರೊನಾ ವೈರಸ್ ಸೊಂಕಿಗೆ ಮೃತಪಟ್ಟವರ ಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 740 ತಲುಪಿದೆ.

ನಿನ್ನೆ (ಮಾರ್ಚ್ 26) ಸಂಜೆ 5 ಗಂಟೆಯಿಂದ ಇಂದು ಬೆಳಿಗ್ಗೆ 8ರ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ದೃಢಪಟ್ಟ ಪ್ರಕರಣಗಳ ವಿವರ ಇಂತಿದೆ.

ADVERTISEMENT

ಪ್ರಕರಣ 56- ದಕ್ಷಿಣ ಕನ್ನಡ ಜಿಲ್ಲೆಯ 10 ತಿಂಗಳ ಗಂಡು ಮಗು. ಈ ಮಗು ಕೋವಿಡ್-19 ಬಾಧಿತ ದೇಶಗಳಲ್ಲಿ ಸಂಚರಿಸಿಲ್ಲ. ಈ ಮಗುವನ್ನು ಪ್ರಸ್ತುತ ದಕ್ಷಿಣ ಕನ್ನಡದ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಮಗುವನ್ನು ಅದರ ಪೋಷಕರು ಕೇರಳಕ್ಕೆ ಕೊಂಡೊಯ್ದಿದ್ದರು. ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಮಗುವಿನ ಸಂಪರ್ಕಕ್ಕೆ ಬಂದಿದ್ದ ಆರು ಮಂದಿಯನ್ನು ಗುರುತಿಸಲಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ.

ಪ್ರಕರಣ 57- ಬೆಂಗಳೂರಿನ 20 ವರ್ಷದ ಪುರುಷ. ಕೊಲಂಬೊದಿಂದ ಭಾರತಕ್ಕೆ ಮಾರ್ಚ್ 15ರಂದು ಬಂದಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 58- ಬೆಂಗಳೂರಿನ 25 ವರ್ಷದ ಮಹಿಳೆ. ಲಂಡನ್‌ನಿಂದ ಭಾರತಕ್ಕೆ ಮಾರ್ಚ್ 18ರಂದು ಬಂದಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 59- ಬೆಂಗಳೂರಿನ 35 ವರ್ಷದ ಮಹಿಳೆ. ಈ ಹಿಂದೆ ಕೊರೊನಾ ಸೋಂಕು ದೃಢಪಟ್ಟಿದ್ದ ವ್ಯಕ್ತಿಯ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದರು. ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 60- ತುಮಕೂರು ಜಿಲ್ಲೆಯ 60 ವರ್ಷದ ಪುರುಷ. ರೈಲಿನಲ್ಲಿ ದೆಹಲಿಗೆ ಮಾರ್ಚ್ 13ರಂದು ತೆರಳಿದ್ದರು. ತುಮಕೂರು ಆಸ್ಪತ್ರೆಯಲ್ಲಿ ಇಂದು ಮೃತಪಟ್ಟರು. ಈತನ ಜೊತೆಗೆ ಹತ್ತಿರದ ಸಂಪರ್ಕ ಹೊಂದಿದ್ದ 13 ಮಂದಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 8 ಮಂದಿಯ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ. ಮೂವರು ಆರೋಗ್ಯ ಸಿಬ್ಬಂದಿಗೆ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಪಡುವಂತೆ ಸೂಚಿಸಲಾಗಿದೆ.

ಪ್ರಕರಣ 61- ಬೆಂಗಳೂರಿನ 33 ವರ್ಷದ ಮಹಿಳೆ. ಕೊರೊನಾ ಸೋಂಕಿತರ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದರು. ಬೆಂಗಳೂರು ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ 62- ಉತ್ತರ ಕನ್ನಡ ಜಿಲ್ಲೆಯ 22 ವರ್ಷದ ಪುರುಷ. ದುಬೈನಿಂದ ಹಿಂದಿರುಗಿದ್ದರು. ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.