ADVERTISEMENT

ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆ: ರಾಜ್ಯಕ್ಕೆ ಎರಡನೇ ಸ್ಥಾನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 16:01 IST
Last Updated 18 ಜನವರಿ 2026, 16:01 IST
   

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ ದೊರೆತಿದ್ದು, ಕೇಂದ್ರ ಸರ್ಕಾರವು ರಾಜ್ಯ ಕೃಷಿ ಇಲಾಖೆಗೆ ಪ್ರಶಸ್ತಿ ನೀಡಿದೆ.

2024–25ನೇ ಸಾಲಿನಲ್ಲಿ ಬೆಳೆ ವಿಮೆ ಯೋಜನೆ ಅಡಿ ರಾಜ್ಯದ 27.04 ಲಕ್ಷ ರೈತರು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 11.85 ಲಕ್ಷ ರೈತರು, ₹2,094 ಕೋಟಿ ಕ್ಲೇಮು ಮಾಡಿದ್ದಾರೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆಯ ಅನುಷ್ಠಾನದಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಕೃಷಿ ಸಚಿವಾಲಯವು ತಿಳಿಸಿದೆ.

ರಾಜ್ಯ ಕೃಷಿ ಇಲಾಖೆ ಆಯುಕ್ತರು–ನಿರ್ದೇಶಕರು ಭಾನುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.