ADVERTISEMENT

ಅಮೃತ ಯೋಜನೆಯಡಿ ರಾಜ್ಯಕ್ಕೆ ₹ 9 ಸಾವಿರ ಕೋಟಿ: ಸಚಿವ ಬಿ.ಎ. ಬಸವರಾಜ

​ಪ್ರಜಾವಾಣಿ ವಾರ್ತೆ
Published 19 ಮೇ 2022, 5:33 IST
Last Updated 19 ಮೇ 2022, 5:33 IST
   

ಕಲಬುರಗಿ: ಕೇಂದ್ರ ಸರ್ಕಾರದ ‌ಅಮೃತ್ ಯೋಜನೆಯಡಿ ‌ರಾಜ್ಯಕ್ಕೆ ₹ 9 ಸಾವಿರ ‌ಕೋಟಿ ಮಂಜೂರಾಗಿದ್ದು, ಇದೇ 23ರಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿ ಕ್ರಿಯಾ ‌ಯೋಜನೆ ರೂಪಿಸಲಾಗುವುದು‌ ಎಂದು‌ ನಗರಾಭಿವೃದ್ಧಿ‌ ಸಚಿವ ಬಿ.ಎ. ಬಸವರಾಜ ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾನಗರಗಳ ಅಭಿವೃದ್ಧಿಗೆ ಕೇಂದ್ರದಿಂದ ಅಪಾರ ಹಣ ಹರಿದು ಬರುತ್ತಿದೆ. ಈ ಹಣವನ್ನು ಮುಖ್ಯವಾಗಿ ‌ಕುಡಿಯುವ ನೀರಿನ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ಕಲಬುರಗಿ ನಗರದ‌ ಕುಡಿಯುವ ನೀರಿನ ಯೋಜನೆಯನ್ನು ಎಲ್ ಅಂಡ್ ಟಿ ಕಂಪನಿಗೆ ವಹಿಸಲಾಗಿದ್ದು, ಕಾಲಮಿತಿಯಲ್ಲಿ ಪೈಪ್ ಲೈನ್ ಜೋಡಣೆ ‌ಮಾಡುವಂತೆ ಸೂಚಿಸಲಾಗಿದೆ. ಯೋಜನೆ ಪೂರ್ಣಗೊಳ್ಳಲು ಇನ್ನೂ ಸಾಕಷ್ಟು ಸಮಯವಿದೆ ಎಂದರು.

ADVERTISEMENT

ಚರಂಡಿ ನೀರನ್ನು ಶುದ್ಧಗೊಳಿಸಿ ನಗರದಲ್ಲಿರುವ ಉದ್ಯಾನಗಳಿಗೆ ಪೂರೈಸಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ವಿವಾದ ಪ್ರಸ್ತುತ ಹೈಕೋರ್ಟ್ ನಲ್ಲಿದೆ. ಮೀಸಲಾತಿ ಹಾಗೂ ಮತದಾರರ ಪಟ್ಟಿ ವಿವಾದದ‌ ಕುರಿತು ನ್ಯಾಯಾಲಯ ನಿರ್ದೇಶನ‌ ನೀಡಬೇಕಿದೆ. ತೀರ್ಪು ಪ್ರಕಟವಾದ ತಕ್ಷಣ ಮೇಯರ್, ಉಪಮೇಯರ್ ಚುನಾವಣೆ‌ಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.