ಬೆಂಗಳೂರು:ವಿಧಾನ ಪರಿಷತ್ನ ತೆರವಾಗಿರುವ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಆರ್.ಪ್ರಕಾಶ್ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಕೊಠಡಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಸಲು ನಾಳೆ ಮಧ್ಯಾಹ್ನ 3 ಗಂಟೆ ತನಕ ಅವಕಾಶಇದೆ.
ಆರ್.ಪ್ರಕಾಶ್ ಅವರು ಸದ್ಯಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಮಧ್ಯೆ, ಬಿಜೆಪಿ ಅಭ್ಯರ್ಥಿಯಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆಯಿಂದ ಪರಿಷತ್ತಿಗೆ ಫೆ.17ರಂದು ಚುನಾವಣೆನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.