ADVERTISEMENT

ಹೈಕಮಾಂಡ್‌ ಸೂಚನೆಯಂತೆ ಅಧಿಕಾರ ಹಸ್ತಾಂತರ: ರಕ್ಷಾ ರಾಮಯ್ಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 16:23 IST
Last Updated 13 ಜುಲೈ 2021, 16:23 IST
ರಕ್ಷಾ ರಾಮಯ್ಯ
ರಕ್ಷಾ ರಾಮಯ್ಯ   

ಮಂಗಳೂರು: ‘ಹೈಕಮಾಂಡ್ ಸೂಚನೆಯಂತೆ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದೆ. ಈಗ ಮುಹಮ್ಮದ್ ನಲಪಾಡ್‌ಗೆ ಅಧಿಕಾರ ಹಸ್ತಾಂತರಿಸುವಂತೆ ಹೈಕಮಾಂಡ್‌ ಸೂಚಿಸಿದೆ. ಅದರಂತೆ ನಡೆಯುತ್ತೇನೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಹಾಗೂ ನಲಪಾಡ್ ನಡುವೆ ಭಿನ್ನಮತವಿಲ್ಲ. 12 ವರ್ಷಗಳಿಂದ ಸ್ನೇಹಿತರಾಗಿದ್ದೇವೆ. ನಮ್ಮೊಳಗೆ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಯುವಕರನ್ನು ಸೆಳೆಯಲು ಅಭಿಯಾನ ಆರಂಭಿಸಲಿದ್ದೇವೆ’
ಎಂದರು.

ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಮುಹಮ್ಮದ್ ನಲಪಾಡ್ ಬಾಯಿತಪ್ಪಿ ಹೇಳಿರಬಹುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.