ADVERTISEMENT

ಪದೋನ್ನತಿಗೆ ಕೆಎಎಸ್‌ ಅಧಿಕಾರಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 17:41 IST
Last Updated 4 ಡಿಸೆಂಬರ್ 2018, 17:41 IST

ಬೆಂಗಳೂರು: ಕೆಎಎಸ್‌ನಿಂದ ಐಎಎಸ್‌ಗೆ ಪದೋನ್ನತಿ ನೀಡುವ ಪ್ರಸ್ತಾವನೆಯನ್ನು ಕೂಡಲೇ ಕೇಂದ್ರ ಸರ್ಕಾರ ಮತ್ತು ಯುಪಿಎಸ್‌ಸಿಗೆ ಕಳುಹಿಸಬೇಕು ಎಂದು ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಆಗ್ರಹಿಸಿದೆ.

ಬಹಳ ಕಾಲದಿಂದ ಪದೋನ್ನತಿ ಹೊಂದದಿರುವ ಅಧಿಕಾರಿಗಳು ಈ ಸಂಬಂಧ ಸಂಘಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಜಯವಿಭವ ಸ್ವಾಮಿ ಮನವಿಯಲ್ಲಿ ತಿಳಿಸಿದ್ದಾರೆ.

ಕೆಎಎಸ್‌ನಿಂದ ಐಎಎಸ್‌ಗೆ ಪದೋನ್ನತಿಗೆ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಈವರೆಗೂ ಕಳುಹಿಸಿಲ್ಲ. ಹಿರಿಯ ಶ್ರೇಣಿಯಿಂದ ಆಯ್ಕೆ ಶ್ರೇಣಿಗೆ ಪದೋನ್ನತಿ ಹೊಂದಲು ಸುಮಾರು 38 ಅಧಿಕಾರಿಗಳು ಅರ್ಹರಿದ್ದಾರೆ. ಇದಕ್ಕೆ ಬಿ.ಕೆ. ಪವಿತ್ರ ಪ್ರಕರಣ ಅಡ್ಡ ಬರುತ್ತದೆ ಎಂದು ತಿಳಿಸಿ ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.