ADVERTISEMENT

5 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ     

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 7:05 IST
Last Updated 19 ನವೆಂಬರ್ 2019, 7:05 IST
   

ಬೆಂಗಳೂರು: ರಾಜ್ಯ ಸರ್ಕಾರ ಹಿರಿಯ ಮತ್ತು ಕಿರಿಯ ಶ್ರೇಣಿಯ ಐದು ಮಂದಿ ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಕೆಎಎಸ್‌ ಅಧಿಕಾರಿಗಳ ಪೈಕಿ ಎಂ.ಸತೀಶ್‌ ಕುಮಾರ್‌ ಅವರನ್ನು ಬೆಳಗಾವಿ ಅಪರ ಜಿಲ್ಲಾಧಿಕಾರಿಯಾಗಿ, ಬಿ. ಅಭಿಜಿನ್‌ ಅವರನ್ನು ಬೈಲಹೊಂಗಲ ಉಪ ವಿಭಾಗಾಧಿಕಾರಿಯಾಗಿ, ಹೆಚ್‌.ಜಿ. ಚಂದ್ರಶೇಖರಯ್ಯ ಅವರನ್ನು ಚಿಕ್ಕೊಡಿ ಉಪ ವಿಭಾಗಾಧಿಕಾರಿಯಾಗಿ, ರವೀಂದ್ರ ಕರಿಲಿಂಗಣ್ಣವರ್‌ ಅವರನ್ನು ಹಾವೇರಿ ಜಿಲ್ಲೆಯಆಹಾರ ಮತ್ತು ಸರಬರಾಜು ಇಲಾಖೆಯ ಉಪ ನಿರ್ದೇಶಕರಾಗಿ, ಬಿ.ಮಲ್ಲಿಕಾರ್ಜುನ ಅವರನ್ನು ಗೋಕಾಕ್‌ನ ನಗರ ಸಭೆ ಪೌರಾಯುಕ್ತರಾಗಿ ನೇಮಕ ಮಾಡಲಾಗಿದೆ.

ಮುಂಬರುವ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.