ADVERTISEMENT

ಮನು ಬಳಿಗಾರ್ ಸೇರಿ ಆರು ಮಂದಿಗೆ ‘ಕಸಾಪ ದತ್ತಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2023, 14:37 IST
Last Updated 30 ಏಪ್ರಿಲ್ 2023, 14:37 IST
ಮನು ಬಳಿಗಾರ್
ಮನು ಬಳಿಗಾರ್   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ‘ಶತಮಾನೋತ್ಸವ ದತ್ತಿ ಪ್ರಶಸ್ತಿ’ಗೆ ಕಸಾಪ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ. 

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಸಾಧಕರನ್ನು ಆಯ್ಕೆ ಮಾಡಿದೆ. ‘ಶತಮಾನೋತ್ಸವ ದತ್ತಿ ಪ್ರಶಸ್ತಿ’ ₹ 50 ಸಾವಿರ ನಗದು ಒಳಗೊಂಡಿದೆ. 

ಕಸಾಪ ಸಿಬ್ಬಂದಿಗೆ ಮೀಸಲಿಟ್ಟಿರುವ ‘ಎನ್.ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿ’ಗೆ ಎಚ್.ಮಂಜುಳಾ, ‘ವಿ.ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿ’ಗೆ ಎನ್.ಕೃಷ್ಣಮೂರ್ತಿ, ಎ.ಅಮರನಾಥ್, ನಾ.ಚಕ್ರಪಾಣಿ ಹಾಗೂ ಕೆ.ರಾಮೇಗೌಡ ಆಯ್ಕೆಯಾಗಿದ್ದಾರೆ.

ADVERTISEMENT

ಮೇ 5ರಂದು ನಡೆಯುವ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಗುವುದು ಎಂದು ಪ್ರಕಟಣೆ ತಿಳಿಸಿದೆ. 

ನಾ. ಚಕ್ರಪಾಣಿ
ಎನ್. ಕೃಷ್ಣಮೂರ್ತಿ
ಎ. ಅಮರನಾಥ್
ಕೆ. ರಾಮೇಗೌಡ
ಮಂಜುಳಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.