ADVERTISEMENT

ಬಿ.ಕೆ. ಸುಮಿತ್ರಾ ಸೇರಿ ಮೂವರಿಗೆ ಕಸಾಪ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 18:02 IST
Last Updated 15 ಜುಲೈ 2021, 18:02 IST
ಬಿ.ಕೆ. ಸುಮಿತ್ರಾ
ಬಿ.ಕೆ. ಸುಮಿತ್ರಾ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆ. ಮೋಹನ್‍ದೇವ್ ಆಳ್ವ ಹಾಗೂ ಡಾ.ಎಂ.ಕೆ. ಶೈಲಜಾ ಆಳ್ವ ದತ್ತಿ ಪ್ರಶಸ್ತಿ’ಗೆ ಗಾಯಕರಾದ ಬಿ.ಕೆ. ಸುಮಿತ್ರಾ ಹಾಗೂ ಪ್ರೊ.ಟಿ.ಎನ್. ಪದ್ಮಾ ಆಯ್ಕೆಯಾಗಿದ್ದಾರೆ.

‘ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕಿ ಅಕ್ಕ ಗಂಗಾಂಬಿಕಾ ಪಾಟೀಲ ಭಾಜನರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಗುರುವಾರ ಈ ಆಯ್ಕೆಗಳು ನಡೆದಿವೆ.

‘ಕೆ. ಮೋಹನ್‍ದೇವ್ ಆಳ್ವ ಹಾಗೂ ಡಾ.ಎಂ.ಕೆ. ಶೈಲಜಾ ಆಳ್ವ ದತ್ತಿ ಪ್ರಶಸ್ತಿ’ಯು ತಲಾ ₹ 30 ಸಾವಿರ ನಗದು ಹಾಗೂ ‘ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿ’ಯು ₹ 15 ಸಾವಿರ ನಗದು ಒಳಗೊಂಡಿದೆ ಎಂದು ಪ್ರಕಟಣೆಯಲ್ಲಿ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.