ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ವಾಪಸ್ ಕರೆತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಬಂಧ ಪ್ರವಾಸಕ್ಕೆ ತೆರಳಿರುವವರ ಮಾಹಿತಿ ನೀಡುವಂತೆ ಪ್ರವಾಸ ನಿರ್ವಹಣೆದಾರರನ್ನು ಕೋರಿ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಜೊತೆಗೆ, ಪ್ರವಾಸಕ್ಕೆ ತೆರಳಿರುವವರ ಸಂಬಂಧಿಕರು ಮತ್ತು ಸ್ನೇಹಿತರು ಪ್ರವಾಸಿಗರ ಮಾಹಿತಿಯನ್ನು ಈ ಕೆಳಕಂಡ ಹೆಲ್ಪ್ಲೈನ್ ಸಂಖ್ಯೆಗೆ ಕರೆಮಾಡಿ ತಿಳಿಸುವಂತೆ ಕೋರಲಾಗಿದೆ.
ಹೆಲ್ಪ್ಲೈನ್ ಸಂಖ್ಯೆಗಳು
* 080-43344334
* 080-43344335
* 080-43344336
* 080-43344342
ಮೃತರ ಮೃತದೇಹಗಳನ್ನು ಅವರ ಊರುಗಳಿಗೆ ಕಳುಹಿಸಲು ವಿಮಾನಗಳ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.