ಶಿವಮೊಗ್ಗ: ‘ನಟ ಶಿವರಾಜ್ ಕುಮಾರ್ ತಮ್ಮ ಅಭಿನಯದ ‘ಕವಚ’ ಚಿತ್ರದ ಪ್ರಚಾರದ ನೆಪದಲ್ಲಿ ಕವಚ ಹಾಕಿಕೊಂಡು ರಾಜಕೀಯ ಮಾಡಲು ಶಿವಮೊಗ್ಗಕ್ಕೆ ಬಂದಿದ್ದಾರೆ. ಅವರಿಗೆ ರಾಜಕೀಯ ಮಾಡುವ ಆಸೆ ಇದ್ದರೆ ಧರಿಸಿದ ಕವಚ ತೆಗೆದಿಟ್ಟು ರಾಜಕೀಯ ಮಾಡಲಿ’ ಎಂದು ಕುಮಾರ್ ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.
‘ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದಲ್ಲಿ ಪ್ರತ್ಯಕ್ಷರಾಗುತ್ತಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್ ‘ಶಿವಮೊಗ್ಗದಲ್ಲಿ ಮನೆ ಮಾಡುತ್ತೇನೆ, ಜನರ ಸೇವೆ ಮಾಡುತ್ತೇನೆ’ ಎಂದು ಹೇಳಿಕೆ ನೀಡಿದ್ದರು. ಈಗ ಮಧು ಬಂಗಾರಪ್ಪ ಪರ ಪ್ರಚಾರಕ್ಕೆ ಬಂದಿದ್ದಾರೆ’ ಎಂದು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.