ADVERTISEMENT

ಕಾವೇರಿ ನಿಸರ್ಗಧಾಮದಲ್ಲಿ ತೂಗು ಸೇತುವೆ ದುರಸ್ತಿ: ಪ್ರವಾಸಿಗರಿಗೆ ಪ್ರವೇಶ ನಿಷೇಧ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 19:31 IST
Last Updated 7 ನವೆಂಬರ್ 2022, 19:31 IST
ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮದ ತೂಗು ಸೇತುವೆ
ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮದ ತೂಗು ಸೇತುವೆ   

ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಕಾವೇರಿ ನಿಸರ್ಗಧಾಮದ ತೂಗುಸೇತುವೆಯ ದುರಸ್ತಿ ಸಲುವಾಗಿ ನ.8ರಿಂದ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ದುರಸ್ತಿ ಬಳಿಕ ಪ್ರವೇಶ ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಶಿವರಾಮ್ ತಿಳಿಸಿದ್ದಾರೆ.

ಹಾರಂಗಿಯಲ್ಲಿ ನೂತನವಾಗಿ ಪ್ರಾರಂಭಿಸಿರುವ ಹಾರಂಗಿ ಸಸ್ಯೋದ್ಯಾನ ಹಾಗೂ ಸಾಕಾನೆ ಶಿಬಿರವು
ಪ್ರವಾಸಿಗರ ವೀಕ್ಷಣೆಗೆ ತೆರೆದಿರುತ್ತದೆ ಎಂದಿದ್ದಾರೆ.

ಗುಜರಾತ್‌ನಲ್ಲಿ ಈಚೆಗೆ ಸಂಭವಿಸಿದ ತೂಗು ಸೇತುವೆ ದುರಂತದಿಂದ ಅರಣ್ಯ ಇಲಾಖೆ ಎಚ್ಚೆತ್ತುಗೊಂಡಿದ್ದು, ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.