ADVERTISEMENT

ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 22:01 IST
Last Updated 28 ಅಕ್ಟೋಬರ್ 2021, 22:01 IST
.
.   

ಮಂಡ್ಯ: ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಗರಿಷ್ಠ ಮಟ್ಟ (124.80 ಅಡಿ) ತಲುಪಲು ಕೇವಲ 0.12 ಅಡಿಯಷ್ಟೇ ಬಾಕಿ ಉಳಿದಿದೆ.

ಗುರುವಾರ ಸಂಜೆ ವೇಳೆಗೆ ಜಲಾಶಯದ ಮಟ್ಟ 124.68 ಅಡಿ ದಾಖಲಾಗಿತ್ತು. 9,734 ಕ್ಯುಸೆಕ್‌ ಒಳಹರಿವು, 3,665 ಕ್ಯುಸೆಕ್‌ ಹೊರಹರಿವು ದಾಖಲಾಗಿತ್ತು.

‘ಗರಿಷ್ಠ ಮಟ್ಟ ತಲುಪಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಶೀಘ್ರ ದಿನಾಂಕ ನಿಗದಿಗೊಳಿಸಲಾಗುವುದು’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.