ADVERTISEMENT

ಕಾವೇರಿ ತಾಲ್ಲೂಕಿಗೆ ಹೋರಾಟ ತೀವ್ರ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 20:15 IST
Last Updated 11 ಫೆಬ್ರುವರಿ 2019, 20:15 IST

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣವನ್ನು ಕೇಂದ್ರವಾಗಿರಿಸಿಕೊಂಡು ನೂತನ ‘ಕಾವೇರಿ ತಾಲ್ಲೂಕು’ ರಚನೆ ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ಹೋರಾಟ ಕೇಂದ್ರೀಯ ಸಮಿತಿ ಸೋಮವಾರ ಕರೆ ನೀಡಿದ್ದ ಬಂದ್‌ ಯಶಸ್ವಿ ಆಯಿತು.

ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿ ಬಂದ್ ಮಾಡಿ ಬೆಂಬಲ ಸೂಚಿಸಿದರು. ವಕೀಲರು ನ್ಯಾಯಾಲಯ ಕಲಾಪಗಳಿಂದ ದೂರ ಉಳಿದರು. ಹೋರಾಟ ಸಮಿತಿ ಸದಸ್ಯರು, ವಿವಿಧ ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಟೋಲ್‌ಗೇಟ್ ಬಳಿ ಪ್ರತಿಭಟನೆ ನಡೆಸಿದರು. ಕಾವೇರಿ ತಾಲ್ಲೂಕು ಪರವಾಗಿ ಘೋಷಣೆ ಕೂಗಿದರು.

ಕುಶಾಲನಗರ ಹಾಗೂ ಸುಂಟಿಕೊಪ್ಪ ವ್ಯಾಪ್ತಿಯ 19 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಜನರು, ಹೊಸ ತಾಲ್ಲೂಕಿಗಾಗಿ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.