ಬೆಂಗಳೂರು: ನಾಡಿನಲ್ಲಿ ಇಂದು (ಜೂ.27) ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ನಿಮಿತ್ತ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿಯಾದುದ್ದು. ಬೆಂಗಳೂರು ನಗರ ನಿರ್ಮಾತೃ ಕೆಂಪೇಗೌಡರ ಜನ್ಮದಿನದಂದು ನಾಡಿನ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆಗಳನ್ನು ಹೆಮ್ಮೆಯಿಂದ ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ 65 ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಆಡಳಿತದ ವೈಖರಿ ಇಂದಿಗೂ ನಮಗೆಲ್ಲಾ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿಯ ಹಾರ್ದಿಕ ಶುಭಾಶಯಗಳು. ಕೆಂಪೇಗೌಡರ ದೂರದೃಷ್ಟಿ, ಸಮರ್ಥ ಹಾಗೂ ಜನಪರ ಆಡಳಿತ ನಮ್ಮಲ್ಲರಿಗೂ ಸದಾ ಪ್ರೇರಣೆ ಯಾಗಿವೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜಕೀಯ ನಾಯಕರು ಮಾತ್ರವಲ್ಲದೇ, ಸಿನಿಮಾ ನಟ ನಟಿಯರು, ಉದ್ಯಮಿಗಳು, ಅಧಿಕಾರಿಗಳು, ಕ್ರೀಡಾಪಟುಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.