ADVERTISEMENT

ದಾದಾಪೀರ್ ಜೈಮನ್‌, ತಮ್ಮಣ್ಣ ಬೀಗಾರಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 10:25 IST
Last Updated 24 ಆಗಸ್ಟ್ 2022, 10:25 IST
ದಾದಾಪೀರ್ ಜೈಮನ್‌ ಮತ್ತು ತಮ್ಮಣ್ಣ ಬೀಗಾರ
ದಾದಾಪೀರ್ ಜೈಮನ್‌ ಮತ್ತು ತಮ್ಮಣ್ಣ ಬೀಗಾರ   

ನವದೆಹಲಿ: ವಿಜಯನಗರಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿರಸಿಯ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ₹ 50,000 ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ADVERTISEMENT

ದಾದಾಪೀರ್ ಅವರಿಗೆ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ ಹಾಗೂ ತಮ್ಮಣ್ಣ ಬೀಗಾರ ಅವರಿಗೆ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗಾಗಿ ಪ್ರಶಸ್ತಿ ದೊರೆತಿದೆ.

‘ನೀಲಕುರಿಂಜ’ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ ‘ಬಾವಲಿ ಗುಹೆ’ಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ. ಸರಜೂ ಕಾಟ್ಕರ್ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.