ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು 2019 ನೇ ಸಾಲಿನಪ್ರಶಸ್ತಿಯನ್ನು ಬುಧವಾರ ಪ್ರಕಟಿಸಿದ್ದು, ಹಿರಿಯ ಲೇಖಕಿ ವಿಜಯಾ ಅವರ ಆತ್ಮಕಥನ ‘ಕುದಿ ಎಸರು’ ಕೃತಿಗೆ ಪ್ರಶಸ್ತಿ ಸಂದಿದೆ.
ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. 2020ರ ಫೆಬ್ರುವರಿ 25ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ತಿಳಿಸಿದೆ.
ಸಾಹಿತಿಗಳಾದ ಬಿ.ಆರ್.ಲಕ್ಷ್ಮಣ ರಾವ್, ಡಾ.ನಾ.ದಾಮೋದರ ಶೆಟ್ಟಿ, ಡಾ.ಲತಾ ಗುತ್ತಿ ಆಯ್ಕೆ ಸಮಿತಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.