Photos| ಕೇರಳ–ಕರ್ನಾಟಕದ ಗಡಿಯಲ್ಲಿ ಬಿಗಿ ತಪಾಸಣೆ: ಮಂಗಳೂರು ರೈಲು ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ
ಮಂಗಳೂರು: ಇಂದಿನಿಂದ ಕೇರಳ-ಕರ್ನಾಟಕ ಗಡಿಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ.ಗಡಿ ಪ್ರದೇಶಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಆರಂಭಿಸಿವೆ.ಗಡಿ ಭಾಗದ ತಲಪಾಡಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ, ತಪಾಸಣೆ ನಡೆಸಿದರು.ಮತ್ತೊಂದೆಡೆ, ಕೇರಳ ಹಾಗೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಮಂಗಳೂರಿನ ಕೇಂದ್ರ ರೈಲು ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ.
ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 8:23 IST
Last Updated 2 ಆಗಸ್ಟ್ 2021, 8:23 IST
ಗಡಿಭಾಗದ ತಲಪಾಡಿಯಲ್ಲಿ ಪೊಲೀಸರು ತಪಾಸಣೆ ನಡೆಸಿದರು.
ಗಡಿಭಾಗದ ತಲಪಾಡಿಯಲ್ಲಿ ಪೊಲೀಸರು ತಪಾಸಣೆ ನಡೆಸಿದರು.
ಗಡಿಭಾಗದ ತಲಪಾಡಿಯಲ್ಲಿ ಪೊಲೀಸರು ತಪಾಸಣೆ ನಡೆಸಿದರು.
ಗಡಿಭಾಗದ ತಲಪಾಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಕಮಿಷನರ್ ಶಶಿಕುಮಾರ್ ತಪಾಸಣೆ ನಡೆಸಿದರು.
ಕೇರಳ ಹಾಗೂ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಮಂಗಳೂರಿನ ಕೇಂದ್ರ ರೈಲು ನಿಲ್ದಾಣದಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ.