ADVERTISEMENT

VIDEO: ಕೋವಿಡ್ ನೆಗೆಟಿವ್ ವರದಿ ಕೈಯಲ್ಲಿದ್ದರೆ ಮಾತ್ರ ರಾಜ್ಯ ಪ್ರವೇಶ: ಕೇರಳ ಗಡಿಯಲ್ಲಿ ಕಟ್ಟೆಚ್ಚರ, ವಾಗ್ವಾದ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 8:52 IST
Last Updated 22 ಫೆಬ್ರುವರಿ 2021, 8:52 IST

ಉಳ್ಳಾಲ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಗಳ ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದೆ. ಆರ್ ಟಿ ಪಿಸಿ ಆರ್ ವರದಿ ಕೈಯಲ್ಲಿದ್ದಲ್ಲಿ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದರು.

ತಪಾಸಣೆ ನಡೆಸಿದಾಗ ಹಲವರ ಬಳಿ ವರದಿ ಇರಲಿಲ್ಲ. ಈ ಸಂದರ್ಭ ಜನರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಕರ್ನಾಟಕದ ವಾಹನಗಳನ್ನು ಕೆಲಕಾಲ ಗಡಿನಾಡು ಕನ್ನಡಿಗರು ತಡೆದಿದ್ದರು. ಹೀಗಾಗಿ, ನಾಳೆಯಿಂದ ಆರ್‌ಟಿಪಿಸಿಆರ್ ಟೆಸ್ಟ್ ತರುವಂತೆ ಅಧಿಕಾರಿಗಳು ಸೂಚಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.