ADVERTISEMENT

ಗೋಪಾಲಕೃಷ್ಣ ಹೆಗಡೆಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 19:38 IST
Last Updated 6 ಜೂನ್ 2022, 19:38 IST
ಗೋಪಾಲ ಹೆಗಡೆ
ಗೋಪಾಲ ಹೆಗಡೆ   

ಬೆಂಗಳೂರು: ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಪತ್ರಕರ್ತ ಗೋಪಾಲ ಕೃಷ್ಣ ಹೆಗಡೆ ಅವರಿಗೆ ಲಭಿಸಿದೆ. ಪ್ರಶಸ್ತಿಯು ₹15 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ ನೀಡುವ ಈ ಪ್ರಶಸ್ತಿಯನ್ನು ಇದುವರೆಗೆ 28 ಪತ್ರಕರ್ತರಿಗೆ ಪ್ರದಾನ ಮಾಡಲಾಗಿದೆ.

ಗೋಪಾಲ ಹೆಗಡೆ ಅವರು ಮೂಲತಃ ಹುಬ್ಬಳ್ಳಿಯವರು. ಕಿರಿಯ ವಯಸ್ಸಿನಲ್ಲೇ ಪತ್ರಿಕೋದ್ಯಮ ಪ್ರವೇಶಿಸಿ, ವಿವಿಧ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕ್ರೀಡಾ ವರದಿಗಾರಿಕೆಯಲ್ಲಿ ಹೆಚ್ಚಿನ ಒಲವು ಹೊಂದಿರುವ ಅವರು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳ ವರದಿ ಮಾಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಸಹ ಸಂಪಾದಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸದ್ಯ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಸಮುದಾಯ ರೇಡಿಯೊದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.