ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಯೋಜನೆಯ ಫಲಾನುಭವಿಗಳಿಗೆ ಫೆಬ್ರುವರಿ 20ರೊಳಗೆ ಕಿಸಾನ್ ಕ್ರೆಡಿಟ್ ಕಾರ್ಡ್ಗಳನ್ನು ವಿತರಿಸುವಂತೆ ಬ್ಯಾಂಕುಗಳಿಗೆ ನಗರ ಜಿಲ್ಲಾಡಳಿತ ನಿರ್ದೇಶನ ನೀಡಿದೆ.
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 39,143 ರೈತರುನೋಂದಣಿಯಾಗಿದ್ದಾರೆ. ಇದುವರೆಗೆ ಕಾರ್ಡ್ ಪಡೆಯದವರು ಸ್ಥಳೀಯ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬೇಕು. ಕೇಂದ್ರ ಸರ್ಕಾರದಿಂದನೋಂದಾಯಿತ ರೈತರ ಬ್ಯಾಂಕ್ ಖಾತೆಗಳಿಗೆ ಮೂರು ಸಮ ಕಂತುಗಳಲ್ಲಿ ₹6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ ₹4 ಸಾವಿರ ಜಮಾ ಆಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.