ADVERTISEMENT

‘ಕಿತ್ತೂರು ಕರ್ನಾಟಕ’ ಹೊರಟ್ಟಿ ಗಡುವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2019, 19:01 IST
Last Updated 10 ಅಕ್ಟೋಬರ್ 2019, 19:01 IST

ಹುಬ್ಬಳ್ಳಿ: ಮುಂಬೈ ಕರ್ನಾಟಕ ಪ್ರದೇಶವನ್ನು ಅ.23ರಂದು ಆರಂಭವಾಗಲಿರುವ ಕಿತ್ತೂರು ಉತ್ಸವಕ್ಕೂ ಮುನ್ನ ಅಥವಾ ಉತ್ಸವದಲ್ಲಿಯೇ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಬೇಕು ಎಂದುವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

‘ಹೈದರಾಬಾದ್‌–ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದ ನಿಮ್ಮ ಕಾರ್ಯ ಚಿರಸ್ಮರಣೀಯ. ಅದೇ ರೀತಿ ಮುಂಬೈ ಕರ್ನಾಟಕ ಕಿತ್ತೂರು ಕರ್ನಾಟಕ ಆಗಬೇಕು ಎಂಬುದು ಸಾಹಿತಿಗಳು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಠಾಧೀಶರ ಒತ್ತಾಸೆಯಾಗಿದೆ‌’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT