ಬೆಂಗಳೂರು: ‘ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸ್ಥಳದಲ್ಲಿ ಸ್ಥಾಪಿಸಿರುವ ಅಖಂಡ ಜ್ಯೋತಿಗೆ ನಂದಿನಿ ತುಪ್ಪ ನೀಡಲಾಗುತ್ತಿದೆ’ ಎಂದು ಕೆಎಂಎಫ್ (ಕರ್ನಾಟಕ ಹಾಲು ಒಕ್ಕೂಟ) ತಿಳಿಸಿದೆ.
ಪಟ್ನಾದ ಮಹಾವೀರ ಮಂದಿರ ಟ್ರಸ್ಟ್ ಮೂಲಕ ತುಪ್ಪ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಈ ಟ್ರಸ್ಟ್ನ ದೇವಾಲಯವು ಅಯೋಧ್ಯೆಯ ರಾಮ ಜನ್ಮಭೂಮಿ ಪಕ್ಕದಲ್ಲೇ ಇದ್ದು, ಆ ದೇವಾಲಯದ ಮೂಲಕ ನಂದಿನಿ ತುಪ್ಪದಲ್ಲಿ ರಘುಪತಿ ಲಡ್ಡು ಪ್ರಸಾದ ತಯಾರಿಸಿ ಭಕ್ತರಿಗೆ ವಿತರಿಸಲಾಗುತ್ತಿದೆ. ಈವರೆಗೆ 1.50 ಲಕ್ಷ ಲಡ್ಡು ವಿತರಿಸಲಾಗಿದೆ‘ ಎಂದು ಹೇಳಿದೆ.
‘300 ಟನ್ ಕೆನೆ ರಹಿತ ಹಾಲಿನ ಪುಡಿಯನ್ನು ಬಾಂಗ್ಲಾದೇಶಕ್ಕೆ ನೇರವಾಗಿ ರಫ್ತು ಮಾಡಲಾಗುವುದು’ ಎಂದು ಕೆಎಂಎಫ್ ತಿಳಿಸಿದೆ.
‘ಸ್ವಾತಂತ್ರ್ಯೋತ್ಸವ ಮತ್ತು ಗೌರಿ ಗಣೇಶ ಹಬ್ಬದ ಅಂಗವಾಗಿ ತುಪ್ಪ, ಬೆಣ್ಣೆ ಹಾಗೂ ಇತರ ಉತ್ಪನ್ನಗಳ ಬೆಲೆಯನ್ನು ಸೆಪ್ಟೆಂಬರ್ 15ರವರೆಗೆ ಇಳಿಕೆ ಮಾಡಲಾಗಿದೆ’ ಎಂದು ವಿವರಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.