ಸಿದ್ದಾಪುರ (ಕೊಡಗು ಜಿಲ್ಲೆ): ಸಮೀಪದ ಪಳ್ಳಕ್ಕರೆಯ ತೋಟದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಎರಡು ಸಲಗ ಪರಸ್ಪರ ಕಾಳಗ ನಡೆಸಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಮಂಗಳವಾರ ಸೆರೆ ಹಿಡಿದಿದ್ದಾರೆ.
ಕೆಲವು ದಿನಗಳಿಂದ ಪಳ್ಳಕ್ಕರೆ ಹಾಗೂ ಗುಹ್ಯ ಗ್ರಾಮಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟದಲ್ಲಿ ಅವು ದಾಂದಲೆ ನಡೆಸುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಿಗೆ ಅಟ್ಟುತ್ತಿದ್ದರೂ, ಮರಳಿ ತೋಟಕ್ಕೆ ಲಗ್ಗೆ ಇಡುತ್ತಿವೆ. ಇದರಿಂದ ಬೆಳೆಗಾರರು ಹಾಗೂ ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.