ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನಲ್ಲಿ ಕಿರುಹೊಳೆ ಉಕ್ಕೇರಿದ ಪರಿಣಾಮ, ಅಪಾಯದಲ್ಲಿ ಸಿಲುಕಿದ್ದ ಏಳು ಕುಟುಂಬಗಳನ್ನು ಬುಧವಾರ ಸಂಜೆ ರಕ್ಷಿಸಲಾಗಿದೆ.
ಸ್ಥಳಕ್ಕೆ ತೆರಳಿದ ಎನ್ಡಿಆರ್ಎಫ್ ಸಿಬ್ಬಂದಿ ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ. ಪುನರ್ವಸತಿ ಕೇಂದ್ರದಲ್ಲಿ ಕೆಲವರಿಗೆ ಆಶ್ರಯ ಕಲ್ಪಿಸಲಾಗಿದೆ. ಉಳಿದವರು ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ. ದಕ್ಷಿಣ ಕೊಡಗಿನಲ್ಲಿ ಲಕ್ಷ್ಮಣತೀರ್ಥ, ಕಿರುಹೊಳೆ ಉಕ್ಕಿ ಹರಿಯುತ್ತಿವೆ. ಇದರಿಂದ ಹಲವು ಮನೆಗಳಿಗೆ ನೀರು ನುಗ್ಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.