ADVERTISEMENT

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಪರ ನಿಂತ ಕೊಡಗಿನ ಜನರು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2018, 16:28 IST
Last Updated 9 ಸೆಪ್ಟೆಂಬರ್ 2018, 16:28 IST
ಪಿ.ಐ. ಶ್ರೀವಿದ್ಯಾ
ಪಿ.ಐ. ಶ್ರೀವಿದ್ಯಾ   

ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ವರ್ಗಾವಣೆಗೆ ಜನಪ್ರತಿನಿಧಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿಬರುತ್ತಿದ್ದು, ಅದರ ವಿರುದ್ಧ ಪ್ರತಿಭಟನೆ ನಡೆಸಲು ಜಿಲ್ಲೆಯ ಜನರು ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲೆಯು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ ವೇಳೆ ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹಗಲು, ರಾತ್ರಿ ಎನ್ನದೇ ಕೆಲಸ ಮಾಡಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ. ಜಿಲ್ಲೆಯ ಮರು ನಿರ್ಮಾಣಕ್ಕೂ ಸಾಕಷ್ಟು ಯೋಜನೆ ರೂಪಿಸಿದ್ದು, ನೆರವು ನಿಧಿಗೆ ಬರುತ್ತಿರುವ ಹಣ
ವನ್ನೂ ಅಭಿವೃದ್ಧಿಗೆ ಬಳಸುತ್ತಿದ್ದಾರೆ. ಈ ಸಂರ್ದಭದಲ್ಲಿ ಅವರ ವರ್ಗಾವಣೆ ಬೇಡ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT