ADVERTISEMENT

ಕೊಡಗು: ಯೋಧ ಸೇರಿ ಇಬ್ಬರು ನೀರುಪಾಲು

ಹೇಮಾವತಿ ಹಿನ್ನೀರಿನಲ್ಲಿ ಘಟನೆ, ಈಜಲು ತೆರಳಿದ್ದಾಗ ದುರ್ಘಟನೆ

​ಪ್ರಜಾವಾಣಿ ವಾರ್ತೆ
Published 1 ಮೇ 2020, 12:08 IST
Last Updated 1 ಮೇ 2020, 12:08 IST
ಯೋಧ ಸೇರಿ ನೀರುಪಾಲಾದ ಇಬ್ಬರನ್ನು ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು
ಯೋಧ ಸೇರಿ ನೀರುಪಾಲಾದ ಇಬ್ಬರನ್ನು ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು   

ಶನಿವಾರಸಂತೆ: ಸೋಮವಾರಪೇಟೆ ತಾಲ್ಲೂಕಿನ ಕಟ್ಟೆಪುರ ಸಮೀಪದ ಹೇಮಾವತಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯೋಧ ಸೇರಿ ಇಬ್ಬರು ನೀರುಪಾಲಾದ ಘಟನೆ ಶನಿವಾರ ನಡೆದಿದೆ.

ತಾಲ್ಲೂಕಿನ ಬೆಸೂರು ನಿವಾಸಿಯೂ ಆಗಿರುವ ಯೋಧ ಲೋಕೇಶ್ (30) ಹಾಗೂ ಲತೇಶ್ (27) ನೀರುಪಾಲದವರು. ಯೋಧ ಲೋಕೇಶ್‌ ಅವರ ಮೃತದೇಹ ಸಿಕ್ಕಿದೆ. ಲತೇಶ್ ಅವರ ಮೃತದೇಹಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕುಟುಂಬಸ್ಥರೊಂದಿಗೆ ಈಜಲು ತೆರಳಿದ್ದರು ಎನ್ನಲಾಗಿದೆ.

ಲೋಕೇಶ್‌ ಅವರು ಕಳೆದ ವಾರವಷ್ಟೇ ಹಾಸನ ಜಿಲ್ಲೆ ಅರಕಲಗೂಡಿನ ಯುವತಿಯೊಂದಿಗೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2009ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರಸಂತೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.