ADVERTISEMENT

‘ಕೊಲ್ಲೂರು ಪ್ರವಾಸ ಮುಂದೂಡಿ’

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 12:48 IST
Last Updated 14 ಮಾರ್ಚ್ 2020, 12:48 IST

ಉಡುಪಿ: ಕೋವಿಡ್‌ ಸೋಂಕು ಹರಡುತ್ತಿರುವುದರಿಂದ ಭಕ್ತರು ಒಂದು ವಾರ ಕೊಲ್ಲೂರು ದೇವಸ್ಥಾನ ಪ್ರವಾಸ ಮುಂದೂಡಬೇಕು ಎಂದು ಕೊಲ್ಲೂರು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ವಿದೇಶಗಳು ಸೇರಿದಂತೆ ದೇಶದೆಲ್ಲೆಡೆ ಕೋವಿಡ್ ಸೋಂಕು ವ್ಯಾಪಿಸಿರುವುದರಿಂದ ಭಕ್ತರು ತಾತ್ಕಾಲಿಕವಾಗಿ ಪ್ರವಾಸ ಮುಂದೂಡಬೇಕು ಎಂದು ತಿಳಿಸಿದ್ದಾರೆ.

ಉಡುಪಿಯ ಮಹತೋಭಾರ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸರಳವಾಗಿ ನಡೆಯಲಿದ್ದು, ನಾಟಕ, ಯಕ್ಷಗಾನ ಸೇರಿದಂತೆ ಮನರಂಜನೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್‌ ಪ್ರದೀಪ್‌ ಕುರ್ಡೆಕರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.