ADVERTISEMENT

‘ನಾರಾಯಣ ಗುರುಗಳ ಪಠ್ಯ ಕೈಬಿಟ್ಟಿಲ್ಲ’

​ಪ್ರಜಾವಾಣಿ ವಾರ್ತೆ
Published 20 ಮೇ 2022, 18:43 IST
Last Updated 20 ಮೇ 2022, 18:43 IST

ಬೆಂಗಳೂರು: ‘ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶವನ್ನು ಹೊಂದಿರುವ ಪಠ್ಯವನ್ನುಶಾಲಾ ಪಠ್ಯಪುಸ್ತಕದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಂದುಶುಕ್ರವಾರ ಹೇಳಿದರು.

‘ಕೃಷ್ಣಾ’ದಲ್ಲಿ ಮಾತನಾಡಿದ ಅವರು, ‘ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರ ಜತೆ ಮಾತುಕತೆ ನಡೆಸಿದ್ದೇನೆ. ಅವರು ಈ ವಿಷಯ ಸ್ಪಷ್ಟಪಡಿಸಿದ್ದಾರೆ. ಪಠ್ಯ ಕೈಬಿಡಲಾಗಿದೆ ಎಂಬ ವದಂತಿಗೆ ಈಡಿಗರು, ಬಿಲ್ಲವರು ಮತ್ತು ನಾರಾಯಣ ಗುರುಗಳ ಅನುಯಾಯಿಗಳು ಕಿವಿಗೊಡಬಾರದು’ ಎಂದೂ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT