ADVERTISEMENT

ಕೆಪಿಸಿಸಿ ವಿಸರ್ಜನೆ: ಅಧ್ಯಕ್ಷ, ಕಾರ್ಯಾಧ್ಯಕ್ಷ ಯಥಾಸ್ಥಿತಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 9:05 IST
Last Updated 19 ಜೂನ್ 2019, 9:05 IST
   

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ)ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಅದೇ ಹುದ್ದೆಗಳಲ್ಲೇ ಮುಂದುವರಿಸಿ, ಉಳಿದ ಪದಾಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ವಿಸರ್ಜಿಸಲು ಎಐಸಿಸಿ ನಿರ್ಧರಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಯೂ ಆಗಿರುವ ಕೆ.ಸಿ. ವೇಣುಗೋಪಾಲ್ ಈ ವಿಷಯ ತಿಳಿಸಿದ್ದಾರೆ. ಕೆಪಿಸಿಸಿಯನ್ನು ವಿಸರ್ಜಿಸಲು ಎಐಸಿಸಿ ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಬದಲಾವಣೆ ಮಾಡುವುದಿಲ್ಲ. ಹಂತಹಂತವಾಗಿ ಉಳಿದ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.