ADVERTISEMENT

ಮತದಾರರ ತೀರ್ಪಿಗೆ ತಲೆಬಾಗಲೇ ಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 7:22 IST
Last Updated 10 ನವೆಂಬರ್ 2020, 7:22 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್   

ಬೆಂಗಳೂರು: ಮತದಾರರು ನೀಡಿದ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಉಪ ಚುನಾವಣೆಯ ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಿನ್ನಡೆಯಲ್ಲಿದೆ. ಈ ಮಧ್ಯೆ, ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮತ ಎಣಿಕೆ ಮುಗಿಯಲು ಇನ್ನೂ ಒಂದೂವರೆಗೆ ಗಂಟೆ ಇದೆ. ಫಲಿತಾಂಶದಲ್ಲಿ ಏನು ಬೇಕಾದರೂ ಆಗುವುದು. ನೋಡೋಣ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT